ಬೆಂಗಳೂರು: ಭಾನುವಾರವೂ ಶಾಲೆಗಳನ್ನು ನಡೆಸುವ ಮೂಲಕ ಪಠ್ಯಕ್ರಮ ಪೂರ್ಣಗೊಳಿಸಲು ಚಿಂತನೆ ನಡೆಸಿದೆ. ಪಠ್ಯಕ್ರಮ ಕಡಿತ ಮಾಡುವ ಆಲೋಚನೆ ಇಲ್ಲವೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಮಾಲೋಚನೆ ನಡೆಸಿ, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಭಿಪ್ರಾಯ ಪಡೆಯಲಾಗುವುದು.
ಶನಿವಾರ, ಭಾನುವಾರವೂ ತರಗತಿ ನಡೆಸಿ ಪಠ್ಯಕ್ರಮ ಪೂರ್ಣಗೊಳಿಸುವ ಕುರಿತು ಪರಿಶೀಲನೆ ನಡೆಸಲಾಗಿದೆ. ಇನ್ನು 10 ಹತ್ತು ದಿನಗಳ ಒಳಗೆ ಉಳಿದ ತರಗತಿ ಆರಂಭಿಸಲಿದ್ದು, ಪರೀಕ್ಷೆಗೆ ಅಗತ್ಯವಿದ್ದಲ್ಲಿ ಮಾತ್ರ ಪಠ್ಯಕ್ರಮ ಕಡಿಮೆ ಮಾಡುವ ಬಗ್ಗೆ ಜನವರಿ, ಫೆಬ್ರುವರಿಯಲ್ಲಿ ತೀರ್ಮಾನಿಸಲಾಗುವುದು ಎಂದರು.
Disclaimer
This story is auto-aggregated by a computer program and has not been created or edited by Dailyhunt Publisher: Kannada Dunia