ಕನ್ನಡದುನಿಯಾ

1.6M Followers

BREAKING: ರಾಜ್ಯದಲ್ಲಿಂದು 293 ಜನರಿಗೆ ಸೋಂಕು, 4 ಮಂದಿ ಸಾವು; ಇಲ್ಲಿದೆ ಮಾಹಿತಿ

09 Nov 2021.6:58 PM

ಬೆಂಗಳೂರು: ರಾಜ್ಯದಲ್ಲಿ ಇಂದು 293 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ. 323 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 29,90,528 ಕ್ಕೆ ಏರಿಕೆಯಾಗಿದೆ.

ಇದುವರೆಗೆ 29,44,422 ಜನ ಗುಣಮುಖರಾಗಿದ್ದಾರೆ. 38,122 ಸೋಂಕಿತರು ಮೃತಪಟ್ಟಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.36 ರಷ್ಟು ಇದೆ. 7955 ಸಕ್ರಿಯ ಪ್ರಕರಣಗಳು ಇವೆ.

ಬೆಂಗಳೂರಿನಲ್ಲಿ ಇಂದು ಹೊಸದಾಗಿ 187 ಜನರಿಗೆ ಸೋಂಕು ತಗುಲಿದ್ದು, ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. 106 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 6498 ಸಕ್ರಿಯ ಪ್ರಕರಣಗಳಿವೆ.

ಬಾಗಲಕೋಟೆ, ಬೀದರ್, ಚಾಮರಾಜನಗರ, ದಾವಣಗೆರೆ, ಗದಗ, ಹಾವೇರಿ, ಕೊಡಗು, ಕೊಪ್ಪಳ, ಶಿವಮೊಗ್ಗ, ಯಾದಗಿರಿ ಜಿಲ್ಲೆಗಳಲ್ಲಿ ಯಾವುದೇ ಪ್ರಕರಣ ವರದಿಯಾಗಿಲ್ಲ. ಬೆಂಗಳೂರು ನಗರ 187, ದಕ್ಷಿಣಕನ್ನಡ 21, ಹಾಸನ 10, ಕೋಲಾರ 12, ಮೈಸೂರು 18 ಹೊಸ ಪ್ರಕರಣಗಳು ವರದಿಯಾಗಿದೆ.

ಬೆಳಗಾವಿ 1, ಬೆಂಗಳೂರು ನಗರ 2, ದಕ್ಷಿಣಕನ್ನಡ 1 ಸೇರಿ ರಾಜ್ಯದಲ್ಲಿಂದು ನಾಲ್ವರು ಸೋಂಕಿತರು ಸಾವನ್ನಪ್ಪಿದ್ದಾರೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada Dunia

#Hashtags