ಕನ್ನಡದುನಿಯಾ

1.6M Followers

ಶಿಕ್ಷಕರಿಗೆ ಮತ್ತೊಂದು ಗುಡ್ ನ್ಯೂಸ್: ಬಯಸಿದ ಜಿಲ್ಲೆಗೆ ವರ್ಗಾವಣೆಗೆ ಕಾಯ್ದೆಗೆ ತಿದ್ದುಪಡಿ

03 Dec 2021.07:02 AM

ಬೆಂಗಳೂರು: ಶಿಕ್ಷಕ ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಶಿಕ್ಷಕರ ವರ್ಗಾವಣೆ ಕಾಯ್ದೆಗೆ ಮತ್ತೊಮ್ಮೆ ತಿದ್ದುಪಡಿ ತರಲು ಶಿಕ್ಷಣ ಇಲಾಖೆ ಮುಂದಾಗಿದೆ.

ಶಿಕ್ಷಕರು ತಾವು ಬಯಸಿದ ಜಿಲ್ಲೆಗೆ ಒಂದು ಸಲ ವರ್ಗಾವಣೆಯಾಗಲು ಮತ್ತು ಶೇಕಡಾ 25 ಕ್ಕಿಂತ ಹೆಚ್ಚು ಖಾಲಿ ಇರುವ ಹುದ್ದೆಗಳಿಗೆ ಅನುಗುಣವಾಗಿ ಲೆಕ್ಕಾಚಾರ ಹಾಕುವ ನಿಯಮವನ್ನು ಕೈಬಿಡಲು ಚಿಂತನೆ ನಡೆದಿದೆ.

ಯಾವುದೇ ನಿರ್ಬಂಧಗಳಿಲ್ಲದೆ ಶಿಕ್ಷಕರಿಗೆ ವರ್ಗಾವಣೆ ನೀಡುವ ಕುರಿತಾಗಿ ಕಾಯ್ದೆಗೆ ತಿದ್ದುಪಡಿ ತರಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.

ಬೆಳಗಾವಿಯಲ್ಲಿ ನಡೆಯುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವರ್ಗಾವಣೆ ಕಾಯ್ದೆಗೆ ತಿದ್ದುಪಡಿ ತರುವ ಕಾಯ್ದೆ ಮಂಡಿಸುವ ಸಾಧ್ಯತೆ ಇದೆ. ಪ್ರಸ್ತುತ ಇರುವ ನಿಯಮದ ಪ್ರಕಾರ, ಶೇಕಡ 25 ಕ್ಕಿಂತ ಹೆಚ್ಚು ಶಿಕ್ಷಕರ ಕೊರತೆ ಇರುವ ತಾಲೂಕಿನಿಂದ ಹೊರಹೋಗಲು ಅವಕಾಶವಿಲ್ಲ. ತಿದ್ದುಪಡಿ ತಂದು ಬಯಸಿದ ಜಿಲ್ಲೆಗೆ ವರ್ಗಾವಣೆಗೆ ಅನುಕೂಲ ಕಲ್ಪಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada Dunia

#Hashtags