ಚಿಕ್ಕಮಗಳೂರು: ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.60 ಲಕ್ಷ ಹುದ್ದೆ ಭರ್ತಿ ಮಾಡಬೇಕು. ಕೇಂದ್ರ ಸರ್ಕಾರಿ ನೌಕರರಿಗೆ ಸಮಾನ ವೇತನ ನೀಡಬೇಕೆಂದು ಒತ್ತಾಯಿಸಿ ಜನವರಿ 20 ರಿಂದ ರಾಜ್ಯ ಸರ್ಕಾರಿ ನೌಕರರು ಸಾಂಕೇತಿಕವಾಗಿ ಪ್ರತಿಭಟನೆ ಕೈಗೊಂಡಿದ್ದಾರೆ.
ಕಡೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಅವರು, ರಾಜ್ಯ ಸರ್ಕಾರಿ ನೌಕರರ ನಾಲ್ಕು ಪ್ರಮುಖ ಬೇಡಿಕೆ ಈಡೇರಿಸಲು ಒತ್ತಾಯಿಸಿ ಸಾಂಕೇತಿಕ ಪ್ರತಿಭಟನೆ ಕೈಗೊಳ್ಳಲಾಗಿದೆ. ಜನವರಿ 20 ರಿಂದ ಎಲ್ಲ ತಾಲೂಕು ಕಚೇರಿ ಮತ್ತು ಜಿಲ್ಲಾಧಿಕಾರಿ ಕಚೇರಿ ಪ್ರತಿಭಟನೆ ನಡೆಯಲಿದೆ. ಮಧ್ಯಾಹ್ನ ಊಟದ ಸಮಯದಲ್ಲಿ 1.30 ರಿಂದ 2.30 ರವರೆಗೆ ಪ್ರತಿಭಟನೆ ಕೈಗೊಳ್ಳಲಾಗಿದ್ದು, NPS ನೌಕರರನ್ನು OPS ನೌಕರರೆಂದು ಪರಿಗಣಿಸಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಗುವುದು ಎಂದು ಹೇಳಿದ್ದಾರೆ.
Disclaimer
This story is auto-aggregated by a computer program and has not been created or edited by Dailyhunt Publisher: Kannada Dunia