ಬೆಂಗಳೂರು: ರಾಜ್ಯ ಸರ್ಕಾರ ಈಗಾಗಲೇ ಗ್ರೂಪ್-ಸಿ ವೃಂದದ ಹುದ್ದೆಗಳಿಗೆ ಮೌಖಿಕ ಪರೀಕ್ಷೆಯನ್ನು ಕೈಬಿಡಲಾಗಿದೆ. ಈ ನಿಯಮ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಗೂ ಅನ್ವಯಿಸಲಿದೆ. ಅಗ್ನಿಶಾಮಕ ಠಾಣಾಧಿಕಾರಿ ಹುದ್ದೆಗಳಿಗೆ ನಿಗದಿ ಪಡಿಸಲಾಗಿದ್ದಂತ ಮೌಖಿಕ ಪರೀಕ್ಷೆಯನ್ನು ಕೈಬಿಡಲಾಗಿದೆ ಎಂದು ಸರ್ಕಾರ ತಿಳಿಸಿದೆ.
ಈ ಬಗ್ಗೆ ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಪೊಲೀಸ್ ಮಹಾ ನಿರ್ದೇಶಕರು ಹಾಗೂ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದು, ದಿನಾಂಕ 01-07-2019ರ ಕರ್ನಾಟಕ ನಾಗರೀಕ ಸೇವೆಗಳ ನೇಮಕಾತಿ ತಿದ್ದುಪಡಿ ನಿಯಮಗಳನುಸಾರ, ಗ್ರೂಪ್-ಸಿ ಹುದ್ದೆಗಳಿಗೆ ಮೌಖಿಕ ಪರೀಕ್ಷೆಯನ್ನು ಕೈ ಬಿಡಲಾಗಿದೆ ಎಂದು ತಿಳಿಸಿದ್ದಾರೆ.
BIG NEWS: 'ಜೆಡಿಎಸ್' ಮತ್ತೊಂದು ವಿಕೆಟ್ ಪತನ: ನಾಳೆ ತೆನೆ ಬಿಟ್ಟು ಕೈ ಹಿಡಿಯಲಿರುವ 'ಮಾಜಿ ಪರಿಷತ್ ಸದಸ್ಯ'
ರಾಜ್ಯ ಸರ್ಕಾರ ನೇಮಕಾತಿ ತಿದ್ದುಪಡಿ ನಿಯಮಗಳ ಅನುಸಾರವಾಗಿ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿನ ಅಗ್ನಿ ಶಾಮಕ ಠಾಣಾಧಿಕಾರಿ ಹುದ್ದೆಗಳು ಈ ನಿಯಮದಡಿಯಲ್ಲಿ ಬರಲಿವೆ. ಈ ಗ್ರೂಪ್-ಸಿ ವೃಂದದ ಹುದ್ದೆಗಳ ನೇರ ನೇಮಕಾತಿಗಳಿಗೆ ಮೌಖಿಕ ಪರೀಕ್ಷೆ ನಿಯಮ ಕೈಬಿಡುವುದನ್ನು ಅಳವಡಿಸಿಕೊಳ್ಳುವಂತೆ ನಿರ್ದೇಶಿಸಿದ್ದಾರೆ.
Disclaimer
This story is auto-aggregated by a computer program and has not been created or edited by Dailyhunt Publisher: Kannada News Now