Kannada News Now

1.8M Followers

BIGG NEWS : `SSLC' ಪರೀಕ್ಷೆ ಕುರಿತಂತೆ ಶಿಕ್ಷಣ ಸಚಿವರಿಂದ ಮಹತ್ವದ ಮಾಹಿತಿ

22 Jan 2022.08:17 AM

ಬೆಂಗಳೂರು : ರಾಜ್ಯದಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತ್ವದ ಮಾಹಿತಿ ನೀಡಿದ್ದು, ಕಳೆದ ವರ್ಷದಂತೆ ಈ ವರ್ಷ ಕೊರೋನಾ ಪಾಸ್ ಇರುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಾರೆ ಎಂದು ಹೇಳಿದ್ದಾರೆ.

BUS PASS : ವಿಕಲಚೇತನರಿಗೆ ಮಹತ್ವದ ಮಾಹಿತಿ : ಬಸ್ ಪಾಸ್ ನವೀಕರಣ ಅರ್ಜಿಗೆ ಫೆ. 28 ಕೊನೆಯ ದಿನ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ವೈರಸ್ ಹಿನ್ನೆಲೆಯಲ್ಲಿ 2020-21 ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿತ್ತು. ವಿದ್ಯಾರ್ಥಿಗಳು ಮತ್ತು ಶಾಲೆಗಳು ತೀವ್ರವಾದ ಕೋವಿಡ್-ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿರುವ ಕಾರಣ ಕಳೆದ ವರ್ಷ ಸಮಸ್ಯೆ ವಿಭಿನ್ನವಾಗಿತ್ತು ಎಂದು ಹೇಳಿದ್ದಾರೆ.

BIGG BREAKING NEWS : ಲಡಾಖ್, ಅರುಣಾಚಲ ಪ್ರದೇಶದಲ್ಲಿ ಭೂಕಂಪನ : ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ದಾಖಲು

ಕಳೆದ ವರ್ಷ ನೀಡಿದ್ದ ಸೌಲಭ್ಯ, ವ್ಯವಸ್ಥೆಯನ್ನೇ ಈ ಬಾರಿಯೂ ವಿಸ್ತರಿಸಿದರೆ, ವಿದ್ಯಾರ್ಥಿಗಳು ಓದುವುದನ್ನೇ ಮರೆತು ಬಿಡುತ್ತಾರೆ. ಇದರಿಂದ ಕೆಟ್ಟ ಪ್ರವೃತ್ತಿಯೊಂದನ್ನು ಬೆಳೆಸಿದಂತಾಗುತ್ತದೆ. ಹೀಗಾಗಿ ಈ ವರ್ಷ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಹೇಳಿದ್ದಾರೆ.

BIG NEWS: ದೇಶದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಂವಾದ ನಡೆಸಲಿರುವ ಪ್ರಧಾನಿ ಮೋದಿ

Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags