Kannada News Now

1.8M Followers

`ಅಕ್ರಮ-ಸಕ್ರಮ' ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಮತ್ತೊಂದು ಸಿಹಿಸುದ್ದಿ

06 Feb 2022.06:38 AM

ಬೆಂಗಳೂರು : ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಭೂರಹಿತರು ಮತ್ತು ಸಣ್ಣ ರೈತರ ಜಮೀನುಗಳ ಸಕ್ರಮಕ್ಕೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಒಂದು ವರ್ಷ ಕಾಲಾವಕಾಶ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

Good news for farmers : ರೈತ ಸಮುದಾಯಕ್ಕೆ ಸಿಹಿಸುದ್ದಿ : ಫೆ. 10 ರಿಂದ ಮನೆ ಬಾಗಿಲಿಗೆ ಉಚಿತ ಪಹಣಿ,ಜಾತಿ-ಆದಾಯ ಪತ್ರ, ಅಟ್ಲಾಸ್ ಸೇವೆ

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಮೂನೆ-50, ನಮೂನೆ -57ರಡಿ ಸಕ್ರಮಕ್ಕೆ ಅರ್ಜಿ ಸಲ್ಲಿಸಿದವರಿಗೆ ಮತ್ತೊಂದು ಅವಕಾಶ ನೀಡಲಾಗುವುದು. ಕಂದಾಯ ಭೂಮಿಯಲ್ಲಿ ಮನೆ ನಿರ್ಮಿಸಿಕೊಂಡವರಿಗೆ ಕಲಂ 94 ಸಿ ಹಾಗೂ 94ಸಿಸಿ ಅಡಿ ನೀಡಿದ ಹಕ್ಕುಪತ್ರಗಳ ನೋಂದಣಿಗೆ ಅಗತ್ಯ ಕ್ರಮಕ್ಕೆ ಸೂಚಿಸಲಾಗಿದೆ ಎಂದರು.

ಗೋಮಾಳ, ಇತರೆ ಭೂಮಿಗೆ ಸಂಬಂಧಿಸಿದಂತೆ ಈ ಹಿಂದಿನ ನಿಯಮ ಬದಲಿಸಿ, ಕಠಿಣ ನಿಯಮ ಜಾರಿಗೊಳಿಸಲಾಗುವುದು.ಸರ್ಕಾರಿ ಜಮೀನು ಅರ್ಹರಿಗೆ ಸಿಗಬೇಕು ಎಂದು ತಿಳಿಸಿದ್ದಾರೆ.


Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags