ಬೆಂಗಳೂರು : ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಭೂರಹಿತರು ಮತ್ತು ಸಣ್ಣ ರೈತರ ಜಮೀನುಗಳ ಸಕ್ರಮಕ್ಕೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಒಂದು ವರ್ಷ ಕಾಲಾವಕಾಶ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಮೂನೆ-50, ನಮೂನೆ -57ರಡಿ ಸಕ್ರಮಕ್ಕೆ ಅರ್ಜಿ ಸಲ್ಲಿಸಿದವರಿಗೆ ಮತ್ತೊಂದು ಅವಕಾಶ ನೀಡಲಾಗುವುದು. ಕಂದಾಯ ಭೂಮಿಯಲ್ಲಿ ಮನೆ ನಿರ್ಮಿಸಿಕೊಂಡವರಿಗೆ ಕಲಂ 94 ಸಿ ಹಾಗೂ 94ಸಿಸಿ ಅಡಿ ನೀಡಿದ ಹಕ್ಕುಪತ್ರಗಳ ನೋಂದಣಿಗೆ ಅಗತ್ಯ ಕ್ರಮಕ್ಕೆ ಸೂಚಿಸಲಾಗಿದೆ ಎಂದರು.
ಗೋಮಾಳ, ಇತರೆ ಭೂಮಿಗೆ ಸಂಬಂಧಿಸಿದಂತೆ ಈ ಹಿಂದಿನ ನಿಯಮ ಬದಲಿಸಿ, ಕಠಿಣ ನಿಯಮ ಜಾರಿಗೊಳಿಸಲಾಗುವುದು.ಸರ್ಕಾರಿ ಜಮೀನು ಅರ್ಹರಿಗೆ ಸಿಗಬೇಕು ಎಂದು ತಿಳಿಸಿದ್ದಾರೆ.
Disclaimer
This story is auto-aggregated by a computer program and has not been created or edited by Dailyhunt Publisher: Kannada News Now