Kannada News Now

1.8M Followers

BIGNEWS: KPSC -2011ನೇ ಸಾಲಿನ ಗೆಜೆಟೆಡ್ ಅಧಿಕಾರಿಗಳ ಹುದ್ದೆ ಆಯ್ಕೆ ಪಟ್ಟಿಗೆ ರಾಜ್ಯ ಸಚಿವ ಸಂಪುಟದಿಂದ ಗ್ರೀನ್‌ ಸಿಗ್ನಲ್‌

09 Feb 2022.3:26 PM

ಬೆಂಗಳೂರು: ಕೆಪಿಎಸ್‌ಸಿ -2011ನೇ ಸಾಲಿನ ಗೆಜೆಟೆಡ್ ಅಧಿಕಾರಿಗಳ ಹುದ್ದೆ ಆಯ್ಕೆ ಪಟ್ಟಿಗೆ ರಾಜ್ಯ ಸಚಿವ ಸಂಪುಟದಿಂದ ಗ್ರೀನ್‌ ಸಿಗ್ನಲ್‌ ನೀಡಿದೆ. ಇಂದು ಸಿಎಂ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಯಿತು.

ಈ ಬಗ್ಗೆ ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಮಾಧುಸ್ವಾಮಿ, : ಕೆಪಿಎಸ್‌ಸಿ -2011ನೇ ಸಾಲಿನ ಗೆಜೆಟೆಡ್ ಅಧಿಕಾರಿಗಳ ಹುದ್ದೆ ಆಯ್ಕೆ ಪಟ್ಟಿಗೆ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಇದಕ್ಕೆ ಸಂಬಂಧಪಟ್ಟಂತೆ,ಮಸೂದೆ ಮಂಡನೆ ಮಾಡಲು ಸಭೆಯಲ್ಲಿ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ ಅಂತ ಹೇಳಿದರು.

ಇದೇ ವೇಳೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆವಿನಹಳ್ಳಿ ಮತ್ತು ಇತರೆ 336 ಜನವಸತಿಗಳನ್ನೊಳಗೊಂಡ 122 ಗ್ರಾಮಗಳಿಗೆ ಜಲ ಜೀವನ ಮಿಷನ್‌ ಅಡಿ ಬಹುಗ್ರಾಮ ಕುಡಿಯುವ ನೀರು ಸರಬರಾಜಿನ ರೂ. 88 ಕೋಟಿ ಅಂದಾಜು ಮೊತ್ತದ ಯೋಜನೆಯನ್ನು ಅನುಷ್ಠಾನಗೊಳಿಸಲು ಅನುಮೋದನೆ ನೀಡಲಾಗಿದೆ ಅಂತ ಅವರು ಹೇಳಿದರು. ಇನ್ನೂ ಶಿವಮೊಗ್ಗ ತಾಲೂಕಿನ ಗೋವಿಂದಪುರ ಹಾಗೂ ಇತರೆ 11 ಜನವಸತಿಗಳು ಮತ್ತು ಗೋಪಿಶೆಟ್ಟಿಕೊಪ್ಪದ 1 ನಗರ ಪ್ರದೇಶಕ್ಕೆ ಜಲ ಜೀವನ್ ಮಿಷನಡಿ ಬಹುಗ್ರಾಮ ಕುಡಿಯುವ ನೀರು ಸರಬರಾಜಿನ ರೂ. 16.73 ಕೋಟಿಗಳ ಅಂದಾಜು ಮೊತ್ತದ ಯೋಜನೆಯನ್ನು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಮುಗ್ಧ ಮನಸ್ಸುಗಳ ಮಧ್ಯೆ ವಿಷದ ಗೋಡೆ ನಿರ್ಮಾಣವಾಗ್ತಿದೆ : ನಟ ಕಮಲ್​ ಹಾಸನ್​

ಬ್ಯಾಂಕ್‌ ಗ್ರಾಹಕರೇ Cheque bounce ಆಗಿದ್ಯಾ..? ಕ್ರಾಸ್ ಚೆಕ್‌ ಮಾಡಲು ಇಲ್ಲಿದೆ ಸುಲಭ ಸಲಹೆ

BIGG NEWS: ಮಹಿಳೆಯರು ಧರಿಸೋ ಬಟ್ಟೆ ಅತ್ಯಾಚಾರಕ್ಕೆ ಪ್ರಚೋಧನೆ ನೀಡುತ್ತೆ - ಶಾಸಕ ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ | Hijab Row


Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags