ಬೆಂಗಳೂರು : ಕೊರೋನಾ ವೈರಸ್ ಸೋಂಕಿಗೆ ಒಳಗಾಗುವ ಸರ್ಕಾರಿ ನೌಕರರಿಗೆ ಮನೆಯಲ್ಲಿ ಪ್ರತ್ಯೇಕವಾಗಿರಲು ಅಥವಾ ಚಿಕಿತ್ಸೆ ಪಡೆಯಲು ವಿಶೇಷ ಸಾಂದರ್ಭಿಕ ರಜೆ ಸೌಲಭ್ಯ ಅನ್ವಯವಾಗಲಿದೆ ಎಂದು ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಚುಚ್ಚುಮದ್ದು ನೀಡಲಾಗಿರುವ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿನ ತೀವ್ರತೆಯು ಪ್ರಸ್ತುತ ಇಳಿಮುಖವಾಗಿದ್ದು, ಇದಕ್ಕೆ ತುತ್ತಾದವರು ಚಿಕಿತ್ಸೆ ಪಡೆದು ಗುಣಮುಖರಾಗುತ್ತಿರುವ ಪ್ರಮಾಣದಲ್ಲಿಯೂ ಗಣನೀಯವಾಗಿಯೂ ಬದಲಾವಣೆ ಆಗಿರುವುದನ್ನು ಪರಿಗಣಿಸಿ ಕೋವಿಡ್ 19 ಸಂಬಂಧ ಮುಂಜಾಗ್ರತಾ ಕ್ರಮದ ಮಾರ್ಗಸೂಚಿಯನ್ನು ಮಾರ್ಪಡಿಸಿ ಆದೇಶಿಸಿರುವುದನ್ನು ಗಮನದಲ್ಲಿಟ್ಟುಕೊಂಡು ಕೋವಿಡ್ 19 ರೋಗದಿಂದ ರಾಜ್ಯ ಸರ್ಕಾರಿ ನೌಕರರಿಗೆ ಸಂದರ್ಭನುಸಾರ ವಿಶೇಷ ಸಾಂದರ್ಭಿಕ ರಜೆಯನ್ನು ಸಂಬಂಧ ಪಟ್ಟ ಸಕ್ಷಮ ಪ್ರಾಧಿಕಾರವು ರಜೆ ಮಂಜೂರು ಮಾಡಬಹುದಾಗಿದೆ.
'ಬಸವರಾಜ ಬೊಮ್ಮಾಯಿ ಸಿಎಂ ಆಗಿ ಇಂದಿಗೆ 6 ತಿಂಗಳು ಪೂರ್ಣ : ಬಿಜೆಪಿ ನಾಯಕರಿಂದ ಹೂಗುಚ್ಚ ನೀಡಿ ಅಭಿನಂದನೆ
ಸರ್ಕಾರಿ ನೌಕರ ಅಥವಾ ಆತನ ಕುಟುಂಬದ ಸದಸ್ಯರು ಕೋವಿಡ್ 19 ಸಾಂಕ್ರಮಿಕ ರೋಗಕ್ಕೆ ಒಳಪಟ್ಟ ಸಂದರ್ಭದಲ್ಲಿ ಹಾಗೂ ಸರ್ಕಾರಿ ನೌಕರನು ವಾಸಿಸುವ ಪ್ರದೇಶದಲ್ಲಿ ಕಂಟೇನ್ಮೆಂಟ್ ಪ್ರದೇಶವೆಂದು ಘೋಷಿಸಿ ಸಾರ್ವಜನಿಕ ಸಂಚಾರದಲ್ಲಿ ಯಾವುದೇ ನಿರ್ಬಂಧ ವಿಧಿಸಿದ್ದಲ್ಲಿ ಅಂತಹ ಸರ್ಕಾರಿ ನೌಕರರಿಗೆ ಗರಿಷ್ಠ 7 ದಿನಗಳ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಬಹುದು.
Disclaimer
This story is auto-aggregated by a computer program and has not been created or edited by Dailyhunt Publisher: Kannada News Now