ಕೊರೋನಾ ಕಾರಣದಿಂದ ಕಳೆದೆರಡು ವರ್ಷ ಸರಿಯಾಗಿ ಶಾಲೆಗಳು ನಡೆದೇ ಇಲ್ಲ. ಹೀಗಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯು ಮಾರ್ಚ್/ಏಪ್ರಿಲ್ ತಿಂಗಳಿಂದ ಶುರುವಾಗಲಿರುವ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದೆ.
ಭೌತಿಕ ತರಗತಿಗಳ ಆರಂಭದ ವಿಳಂಬ, ಆನ್ಲೈನ್ ತರಗತಿಗಳ ಸಮಯದಲ್ಲಿ ನೆಟ್ವರ್ಕ್ ಸಮಸ್ಯೆಗಳನ್ನು ಪರಿಗಣಿಸಿ, ಈ ಶೈಕ್ಷಣಿಕ ವರ್ಷದಲ್ಲಿ ಬೋರ್ಡ್ ಪರೀಕ್ಷೆಗಳಿಗೆ ಹಾಜರಾಗಲು 75% ಹಾಜರಾತಿಯನ್ನು ಕಡ್ಡಾಯಗೊಳಿಸದಿರಲು ಇಲಾಖೆ ನಿರ್ಧರಿಸಿದೆ. ಈ ಬಗ್ಗೆ ಮಾತನಾಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್, "ಈ ವರ್ಷದಲ್ಲಿ 75% ಹಾಜರಾತಿಯನ್ನು ಖಚಿತಪಡಿಸಿಕೊಳ್ಳುವುದು ಕಡ್ಡಾಯವಲ್ಲ. ಈ ವಿಚಾರವಾಗಿ ಕಾಲೇಜು ಮಟ್ಟದಲ್ಲಿ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
BIG NEWS: ಕಾಂಗ್ರೆಸ್ ರಾಜಕೀಯ ಹಿತಾಸಕ್ತಿಗೆ ಸಂಕಷ್ಟಕ್ಕೀಡಾದ ಜನರು; ಪಾದಯಾತ್ರೆ ವಿರುದ್ಧ ಸಿಎಂ ಬೊಮ್ಮಾಯಿ ವಾಗ್ದಾಳಿ
ಹಾಜರಾತಿ ಕೊರತೆಯಿಂದ ಪ್ರತಿ ವರ್ಷ ಕನಿಷ್ಠ 2,000 ರಿಂದ 4,000 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವುದಿಲ್ಲ. ಕರ್ನಾಟಕ ಶಿಕ್ಷಣ ಕಾಯಿದೆ, 2006 ರ ನಿಯಮ 21, ವಿದ್ಯಾರ್ಥಿಗಳು 10 ನೇ ತರಗತಿ ಮತ್ತು ದ್ವಿತೀಯ ಪಿಯುಸಿ ಬೋರ್ಡ್ ಪರೀಕ್ಷೆಗಳಿಗೆ ಹಾಜರಾಗಲು 75% ಹಾಜರಾತಿಯನ್ನು ಕಡ್ಡಾಯಗೊಳಿಸುತ್ತದೆ. ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಅನುಸರಿಸಿ ಕಾಯಿದೆಗೆ ತರಲಾದ ತಿದ್ದುಪಡಿಗಳ ಪ್ರಕಾರ, ಯಾವುದೇ ವಿದ್ಯಾರ್ಥಿಗಳು ಹಾಜರಾತಿಯಲ್ಲಿ (ಶೇ. 75 ಕ್ಕಿಂತ ಕಡಿಮೆ) ಕೊರತೆಯಿದ್ದರೆ ಅಂತಹ ವಿದ್ಯಾರ್ಥಿಗಳಿಗೆ ಪರೀಕ್ಷೆಗಳಿಗೆ ಹಾಜರಾಗಲು ಅನುಮತಿಸಲಾಗುವುದಿಲ್ಲ ಮತ್ತು ಪ್ರವೇಶ ಪತ್ರಗಳನ್ನು ನೀಡಲಾಗುವುದಿಲ್ಲ.
Disclaimer
This story is auto-aggregated by a computer program and has not been created or edited by Dailyhunt Publisher: Kannada Dunia