ಹೈದರಾಬಾದ್: ಶಿಕ್ಷಕರ ವಿರುದ್ಧ 8 ವರ್ಷದ ಬಾಲಕನೊಬ್ಬ ಪೊಲೀಸ್ ಠಾಣೆಯ ಮೆಟ್ಟಿಲೇರಿದ ಅಪರೂಪದ ಪ್ರಸಂಗ ತೆಲಂಗಾಣದ ಮೆಹಬೂಬಬಾದ್ ಜಿಲ್ಲೆಯ ಬಯ್ಯಾಪುರಂ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಪೊಲೀಸ್ ಠಾಣೆಗೆ ಅಳುತ್ತಾ ಬಂದ ಬಾಲಕನನ್ನು ಪೊಲೀಸರು ಪ್ರಶ್ನಿಸಿದಾಗ, ಬಾಲಕ ಕೊಟ್ಟ ಉತ್ತರ ಕೇಳಿ ಪೊಲೀಸರೇ ಶಾಕ್ ಆಗಿದ್ದಾರೆ.
ಇದಾದ ಬಳಿಕ ಬಾಲಕನನ್ನು ಶಾಲೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಲಾಯಿತು. ಈ ವೇಳೆ ತನಗೆ ಹೊಡೆದ ಶಿಕ್ಷಕರನ್ನು ಬಾಲಕ ತೋರಿಸಿದ್ದಾನೆ. ಮಕ್ಕಳಿಗೆ ಪಾಠ ಹೇಳಬೇಕಾದ ಶಿಕ್ಷಕರು ಶಿಸ್ತುಮರೆತಿದ್ದು, ಅವರಿಗೆ ಪೊಲೀಸರು ಸಮಾಲೋಚನೆ ನೀಡಿದರು.' ಇನ್ನೊಮ್ಮೆ ಮಕ್ಕಳೊಂದಿಗೆ ಸರಿಯಾಗಿ ನಡೆದುಕೊಳ್ಳುವಂತೆ ಶಿಕ್ಷಕರಿಗೆ ತಿಳಿ ಹೇಳಿದರು.
ಪುಟ್ಟ ವಯಸ್ಸಿನಲ್ಲಿಮ ದೂರು ಕೊಡಲು ಪೊಲೀಸ್ ಠಾಣೆಯ ಮೆಟ್ಟಿಲೇರಿದ ಬಾಲಕನ ಧೈರ್ಯವನ್ನು ಪೊಲೀಸರು ಮೆಚ್ಚಿಕೊಂಡರು. ಅಲ್ಲದೆ, ಠಾಣೆಗೆ ಆಗಮಿಸುವಾಗ ಮಾಸ್ಕ್ ಧರಿಸಿ ಕರೊನಾ ನಿಯಮಗಳನ್ನು ಪಾಲಿಸಿದ ರೀತಿಯು ಇಷ್ಟವಾಗಿದೆ. ಇದೀಗ ಈ ಘಟನೆ ಮೆಹಬೂಬಬಾದ್ ಜಿಲ್ಲೆ ಭಾರೀ ಚರ್ಚೆಯ ವಿಷಯವಾಗಿದೆ. ಶಿಕ್ಷಕರು ಹೊಡೆದರೆ ಅಳುತ್ತಾ ಮನೆಗೆ ಹೋಗುತ್ತಿರುವ ಮಕ್ಕಳನ್ನು ನಾವು ನೋಡಿದ್ದೇವೆ. ಆದರೆ, ಪೊಲೀಸ್ ಠಾಣೆಗೆ ಹೋಗಿ ಈ ರೀತಿ ದೂರು ನೀಡುವುದು ಹಾಸ್ಯಾಸ್ಪದ ಎಂದು ಹಲವರು ಪ್ರತಿಕ್ರಿಯಿಸುತ್ತಿದ್ದಾರೆ. ಸದ್ಯ ಘಟನೆಯ ವಿಡಿಯೋ ವೈರಲ್ ಆಗಿದೆ. (ಏಜೆನ್ಸೀಸ್)
ತನ್ನ ಕಾರು ಅಪಘಾತಕ್ಕೀಡಾದ ಬಗ್ಗೆಯೇ ಹೊಸ ಹಾಡು ರಚಿಸಿ ಧ್ವನಿ ನೀಡಿದ ಕಚ್ಚಾ ಬಾದಾಮ್ ಗಾಯಕ!
ನಡೆದಾಡುವ ದೇವರೆಂದೇ ಹೆಸರಾಗಿದ್ದ ಚನ್ನಪಟ್ಟಣದ ಗೌಡಗೆರೆ ಗ್ರಾಮದ ಪವಾಡ ಬಸವಪ್ಪ ಇನ್ನಿಲ್ಲ
ಈ ಎರಡು ಪೀಸ್ ಬಟ್ಟೆಗೆ ಇಷ್ಟೊಂದು ಹಣ ಕೊಡ್ಬೇಕಿತ್ತಾ? ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿರುವ ಕರೀನಾ!
ದುಬೈನಲ್ಲಿ ಕೇರಳದ ಸೋಶಿಯಲ್ ಮೀಡಿಯಾ ಸ್ಟಾರ್ ಸಾವು: ಗಂಡನ ಮೇಲಿನ ಸಂಶಯಕ್ಕೆ ಕಾರಣ ಹೀಗಿದೆ…
ನಡೆದಾಡುವ ದೇವರೆಂದೇ ಹೆಸರಾಗಿದ್ದ ಚನ್ನಪಟ್ಟಣದ ಗೌಡಗೆರೆ ಗ್ರಾಮದ ಪವಾಡ ಬಸವಪ್ಪ ಇನ್ನಿಲ್ಲ
Disclaimer
This story is auto-aggregated by a computer program and has not been created or edited by Dailyhunt Publisher: Vijayvani