ತುಮಕೂರು: ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ನಡೆದಾಡಿದ ನೆಲದಲ್ಲಿ ಸ್ಪೂರ್ತಿ, ಹೆಮ್ಮೆ ಇದೆ.
ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿ 115ನೇ ಜಯಂತಿ ಹಿನ್ನೆಲೆ ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ತುಮಕೂರು ಸಿದ್ಧಗಂಗಾ ಮಠದಲ್ಲಿ ಗುರುವಂದನಾ ಕಾರ್ಯಕ್ರಮ ನಡೆಯುತ್ತಿದೆ. 'ನಡೆದಾಡುವ ದೇವರ ಬಸವ ಭಾರತ' ಹೆಸರಿನಲ್ಲಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹಿತ ಹಲವು ಗಣ್ಯರು ಪಾಲ್ಗೊಂಡಿದ್ದಾರೆ.
ಮಧ್ಯಾಹ್ಯದ ಬಿಸಿ ಊಟದ ಯೋಜನೆಗೆ ಶಿವಕುಮಾರ ಸ್ವಾಮೀಜಿ ಹೆಸರು ಇಡಲು ಸರ್ಕಾರ ಮುಂದಾಗುತ್ತೆ. ಅವರು ಕಷ್ಟದಲ್ಲಿರುವವರಿಗೆ ಬದುಕು ಕಟ್ಟಿಕೊಡುತ್ತಿದ್ದರು. ಮಧ್ಯಾಹ್ನದ ಬಿಸಿಯೂಟದ ಯೋಜನೆಗೆ ಶಿವಕುಮಾರ ಸ್ವಾಮೀಜಿಗಳ ಹೆಸರನ್ನ ಇಡಲಾಗುವುದು. ಈ ಬಗ್ಗೆ ಆದೇಶ ಹೊರಡಿಸುತ್ತೇನೆ ಎಂದು ಕಾರ್ಯಕ್ರಮದಲ್ಲಿ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಪಠ್ಯದಲ್ಲಿ ಶಿವಕುಮಾರಶ್ರೀಗಳ ಬಗ್ಗೆ ಅಳವಡಿಸಬೇಕೆಂದು ಬಿಎಸ್ ಯಡಿಯೂರಪ್ಪ ಮನವಿ
ಪಠ್ಯದಲ್ಲಿ ಶಿವಕುಮಾರಶ್ರೀಗಳ ಬಗ್ಗೆ ಅಳವಡಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ. ತುಮಕೂರಿನ ಗುರುವಂದನಾ ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಈ ಬಗ್ಗೆ ಹೇಳಿದ್ದಾರೆ. ಇಂದು ನಮ್ಮೆಲ್ಲರಿಗೂ ಸೌಭಾಗ್ಯ ದಿನ. ನಡೆದಾಡುವ ದೇವರಾಗಿರುವ ಶಿವಕುಮಾರ ಶ್ರೀಗಳ 115 ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇವೆ. ಜಾತಿ ಭೇದವಿಲ್ಲದೆ ಪ್ರದೇಶ ಭೇದವಿಲ್ಲದೆ ಅವರು ತಮ್ಮ ಸೇವೆ ಮಾಡಿದ್ದಾರೆ. ಹಲವು ಬಾರಿ ನನ್ನನ್ನು ಪೂಜ್ಯರು ಕರೆಸಿಕೊಂಡು ಮಾರ್ಗದರ್ಶನ ಮಾಡಿದ್ದಾರೆ. ಅನ್ನದಾನ ವಿದ್ಯಾದಾನ ಹಲವು ದಾನ ಮಾಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗಿಯಾಗಿರೋದು ಅರ್ಥಪೂರ್ಣವಾಗಿದೆ. ಪೂಜ್ಯರ ವಿಚಾರವನ್ನು ಪಠ್ಯದಲ್ಲಿ ಅಳವಡಿಸುವ ಬಗ್ಗೆ ಮುಖ್ಯ ಮಂತ್ರಿಗಳಿಗೆ ಮನವಿ ಮಾಡುತ್ತೆನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಪೂಜ್ಯರು ನಿಸ್ವಾರ್ಥ ಸೇವೆ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾಕ್ಕೆ ನಾನು ಅಮಿತ್ ಶಾಗೆ ಧನ್ಯವಾದ ತಿಳಿಸುತ್ತೇನೆ. ನರೇಂದ್ರ ಮೋದಿಯವರು ದೇಶದ ರೈತರಿಗೆ ವಿಶೇಷ ಸೇವೆ ಕೊಟ್ಟಿದ್ದಾರೆ. ರೈತರು ಸ್ವಾಭಿಮಾನದಿಂದ ಬಾಳಬೇಕು ಎಂದು ಕನಸು ಕಾಣುತ್ತಿರುವುದು ನಮ್ಮ ಮೋದಿ, ಅಮಿತ್ ಶಾ ಅವರು. ಅಮಿತ್ ಶಾ ಅವರು ಕಾರ್ಯಕ್ರಮಕ್ಕೆ ಬಂದಿರುವುದು ಹೊಸ ರೂಪ ತಂದಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ. ಇದೇ ವೇಳೆ ಅವರು ನಾಡಿನ ಜನತೆಗೆ ಯುಗಾದಿ ಹಬ್ಬದ ಶುಭಾಶಯ ಕೋರಿದ್ದಾರೆ.
ಡಾ. ಶಿವಕುಮಾರ ಸ್ವಾಮೀಜಿ ಜಗತ್ತು ಕಂಡ ಒಂದು ಅಚ್ಚರಿ: ಪ್ರಲ್ಹಾದ್ ಜೋಶಿ
ಡಾ. ಶಿವಕುಮಾರ ಸ್ವಾಮೀಜಿ ಜಗತ್ತು ಕಂಡ ಒಂದು ಅಚ್ಚರಿ. ಅನಾಥರು, ಅಂಧರು, ಮನೆಯಿಂದ ಹೊರಹಾಕಲ್ಪಟ್ಟವರಿಗೆ ಡಾ. ಶಿವಕುಮಾರ ಸ್ವಾಮೀಜಿಯವರು ದೇವರಿದ್ದಂತೆ. ಶ್ರೀಗಳ ಪ್ರೇರಣೆಯಿಂದ ಮೋದಿ ದಾಸೋಹ ಮಾಡಿದ್ದಾರೆ. ಶ್ರೀಗಳು ಹಾಕಿಕೊಟ್ಟ ಮಾರ್ಗದಲ್ಲಿ ನಮ್ಮ ಸರ್ಕಾರ ನಡೆಯುತ್ತಿದೆ. ಪೂಜ್ಯರು ನಡೆದಂತೆ ನಮ್ಮ ಸರ್ಕಾರವೂ ನಡೆದುಕೊಳ್ಳುತ್ತಿದೆ ಎಂದು ತುಮಕೂರಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: ಡಾ. ಶಿವಕುಮಾರ ಸ್ವಾಮೀಜಿ ಜಯಂತೋತ್ಸವ: ಮಠಕ್ಕೆ ಆಗಮಿಸಿ, ಸ್ವಾಮೀಜಿ ಗದ್ದುಗೆಗೆ ಪೂಜೆ ಸಲ್ಲಿಸಿದ ಅಮಿತ್ ಶಾ
ಇದನ್ನೂ ಓದಿ: ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತೋತ್ಸವ: ವಾಹನ ಸಂಚಾರ, ಪಾರ್ಕಿಂಗ್, ಊಟೋಪಚಾರ ವ್ಯವಸ್ಥೆಯ ಬಗ್ಗೆ ಇಲ್ಲಿದೆ ಮಾಹಿತಿ
Disclaimer
This story is auto-aggregated by a computer program and has not been created or edited by Dailyhunt Publisher: TV9 Kannada