Kannada News Now

1.8M Followers

Good News : ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ : `ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ' ಅನುಷ್ಠಾನಕ್ಕೆ ಪ್ರತ್ಯೇಕ ಕೋಶ ರಚನೆ

17 Jun 2022.07:23 AM

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಕರ್ನಾಟಕ ರಾಜ್ಯ ಸರ್ಕಾರಿನೌಕರರು ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆ ಒದಗಿಸುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ನಿರ್ವಹಿಸಲು ಹಾಗೂ ಅನುಷ್ಠಾನಗೊಳಿಸಲು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಗೆ ಒಂದು ಪ್ರತ್ಯೇಕ ಕೋಶ ರಚಿಸಲು ಸರ್ಕಾರ ಮಂಜೂರಾತಿ ನೀಡಿದೆ.

ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಂಬಂಧ ವ್ಯವಸ್ಥಾಪಕ ನಿರ್ದೇಶಕ, ಜಂಟಿ ನಿರ್ದೇಶಕ, ಉಪ ನಿರ್ದೇಶಕ ಹಾಗೂ ಯೋಜನಾ ವ್ಯವಸ್ಥಾಪಕ ಸೇರಿದಂತೆ ಒಟ್ಟು 56 ಹುದ್ದೆಗಳನ್ನೊಳಗೊಂಡ ಪ್ರತ್ಯೇಕ ಕೋಶವನ್ನು ಸೃಜಿಸಲು ಸರ್ಕಾರ ಹಸಿರು ನಿಶಾನೆ ತೋರಿದೆ.



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags