ವಿವಾಹವಾಗದ ಮಾತ್ರಕ್ಕೆ ಒಪ್ಪಿತ ಲೈಂಗಿಕ ಸಂಬಂಧ ಅತ್ಯಾಚಾರವಾಗುವುದಿಲ್ಲ ಎಂದು ಕೇರಳ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಮೋಸದಿಂದ ಅಥವಾ ಮದುವೆಯಾಗುವ ಸುಳ್ಳು ಭರವಸೆಯನ್ನು ಉದ್ದೇಶಪೂರ್ವಕವಾಗಿಯೇ ನಂಬಿಕೆ ಬರುವಂತೆ ಒಪ್ಪಿಸಿ ಲೈಂಗಿಕ ಕ್ರಿಯೆ ನಡೆಸಿದರೆ ಅದು ಸಮ್ಮತವಲ್ಲವೆಂದು ನ್ಯಾಯಪೀಠ ಹೇಳಿದೆ.
ಕೇಂದ್ರ ಸರ್ಕಾರದ ವಕೀಲ ನವನೀತ್ ಅವರ ಪ್ರಕಾರದ ವಿಚಾರಣೆ ವೇಳೆ ಹೈಕೋರ್ಟ್ ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ಅವರಿದ್ದ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದ್ದು, ಕೆಲ ಷರತ್ತುಗಳನ್ನು ವಿಧಿಸುವ ಮೂಲಕ ನವನೀತ್ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ.
ಪ್ರಕರಣದ ವಿವರ: ನವನೀತ್ ಅವರ ಸಹೋದ್ಯೋಗಿಯಾಗಿದ್ದ ವಕೀಲೆಯೊಬ್ಬರು ತಮಗೆ ಮದುವೆಯ ಸುಳ್ಳು ಭರವಸೆ ನೀಡಿ ಅತ್ಯಾಚಾರ ನಡೆಸಲಾಗಿದೆ ಎಂದು ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ನವನೀತ್ ಬಂಧನಕ್ಕೊಳಗಾಗಿದ್ದು ಅವರು ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.
Disclaimer
This story is auto-aggregated by a computer program and has not been created or edited by Dailyhunt Publisher: Kannada Dunia